ರಾಜ್ಯ

ʼಮಾತೃ ಭಾಷೆ ಕಡ್ಡಾಯ ಮಸೂದೆʼಯನ್ನು ಕೇಂದ್ರ ತಿರಸ್ಕರಿಸಿದೆ: ಮಧು ಬಂಗಾರಪ್ಪ

ಬೆಳಗಾವಿ : ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರಗೊಳಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, 2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇನ್ನೂ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದೂ ಸಚಿವರು ಉಲ್ಲೇಖಿಸಿದರು.

ಇದಕ್ಕೂ ಮೊದಲು ಯು.ಬಿ.ವೆಂಕಟೇಶ್ 1ರಿಂದ 5ನೇ ತರಗತಿಯ ವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ, ಇಲ್ಲವೇ ಮಾತೃ ಭಾಷೆಯನ್ನಾಗಿ ಕಡ್ಡಾಯಗೊಳಿಸಬೇಕೆಂಬುದು ಈ ಮಸೂದೆಯ ಮೂಲ ಉದ್ದೇಶ. ನಮ್ಮ ಮಕ್ಕಳಿಗೆ ನಾವೇ ಕನ್ನಡ ಕಲಿಸಲು ಆದ್ಯತೆ ನೀಡದಿದ್ದರೆ ಹೇಗೆ? ಇದಕ್ಕೆ ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಹುಡುಕಬೇಕೆಂದು ಸಲಹೆ ನೀಡಿದರು.

ಮಧುಬಂಗಾರಪ್ಪ ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಮೀಡಿಯಂ ಆಫ್ ಸ್ಟಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನಲೆಯಲ್ಲಿ ಕಡ್ಡಾಯ ಮಾಡಲು ಬರುವುದಿಲ್ಲ ಎಂದು ಮಸೂದೆಯನ್ನು ತಿರಸ್ಕರಿಸಿದೆ ಎಂದರು. ಇದಕ್ಕೆ, ಯು.ಬಿ.ವೆಂಕಟೇಶ ಈ ಮಸೂದೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದರೆ ಕೇಂದ್ರ ಸರ್ಕಾರ ನಮ್ಮ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಾರೆ ಎಂದು ಹೇಳಿದರು.

andolanait

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

2 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

2 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

2 hours ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

2 hours ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago