ಬೆಳಗಾವಿ : ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಕುರಿತು ರಾಜ್ಯ ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇದರಿಂದ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವು ನಗರಗಳಿಗೆ ನೀರು ಪೂರೈಕೆಗೆ ಸಹಕಾರಿಯಾಗಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ನಮ್ಮ ಜೊತೆ ಕೈಜೋಡಿಸಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನೀರು ನಮ್ಮ ಹಕ್ಕು, ನಿಮ್ಮ ನೀರು ನಿಮ್ಮ ಹಕ್ಕು ತತ್ವದ ಮೇಲೆ ಹೋರಾಡೋಣ. ಈ ಯೋಜನೆಯ ಅನುಷ್ಠಾನದಿಂದ ನಮಗಿಂತ ತಮಿಳುನಾಡಿನವರಿಗೆ ಹೆಚ್ಚಿನ ಅನುಕೂಲ ಆಗಲಿದೆ. ಅವರಿಗೆ ಹೆಚ್ಚಿನ ಕುಡಿಯುವ ನೀರು ಸಿಕ್ಕರೆ ನಮಗೆ ೪೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದರು.
ಮೇಕೆದಾಟು ಯೋಜನೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೋಳ್ಳಲಾಗಿದೆ. ನಮ್ಮ ನೆಲದಲ್ಲಿಯೇ ಈ ಯೋಜನೆಯನ್ನು ಜಾರಿಗೊಳಸಿದರೂ ಸಹಾ, ಕೇಂದ್ರ ಸರ್ಕಾರ, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು. ಇವುಗಳ ಒಪ್ಪಿಗೆ ಇಲ್ಲದೇ ಯೋಜನೆ ಆರಭಿಸಲು ಆಗುವುದಿಲ್ಲ. ಈ ಯೋಜನೆಯಿಂದ ಎರಡು ರಾಜ್ಯಗಳ ಸಂಕಷ್ಟ ಪರಿಸ್ಥಿತಿಗಳು ಸುಧಾರಣೆ ಆಗಲಿದ್ದು, ಶಾಸ್ವತ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…