ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಆದರೆ ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 1.5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.
ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಎನ್.ಚಲುವರಾಯಸ್ವಾಮಿರವರು 2024ರ ಡಿಸೆಂಬರ್ 13 ರಂದ ಪತ್ರ ಬರೆದು ಮನವಿ ಮಾಡಿದ್ದರು.
ಇದಕ್ಕೆ ಸ್ಪಂದನೆ ನೀಡಿರುವ ಕೇಂದ್ರ ಆಹಾರ ಮತ್ತು ಗ್ರಾಹರಕರ ವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣೆ ಮತ್ತು ಹೊಸ ನವೀಕರಿಸಬಹುದಾದ ಇಂಧನ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿರವರಿಗೆ ನಿರ್ದೇಶನ ನೀಡಿದೆ.
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…