Mysore
27
overcast clouds

Social Media

ಶನಿವಾರ, 11 ಜುಲೈ 2026
Light
Dark

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

DCM D.K. Shivakumar says there will be a big revolution in the state by 2028

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕನಕಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ. ಮನರೇಗಾ ಯೋಜನೆ ಮರು ಜಾರಿ ಮಾಡಲಿ ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

ಚುನಾವಣೆ ನಡೆಯುವ ರಾಜ್ಯಗಳಿಗೆ ಅನುಕೂಲವಾಗುವ ಬಜೆಟ್‌ ಇದು. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ರಾಜ್ಯಕ್ಕೆ ನಷ್ಟವಾಗುತ್ತಿದೆ. ಕರ್ನಾಟಕಕ್ಕೆ ಇಷ್ಟೊಂದು ದೊಡ್ಡ ಅನ್ಯಾಯ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!