ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ನಲ್ಲಿ ಒಂದೇ ಒಂದು ಜನಪರ ಯೋಜನೆಯೂ ಇಲ್ಲ ಎಂದು ಕಿಡಿಕಾರಿದರು.
ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳು ಕೂಡ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ.
ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು, ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂರು ಸಾಲ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಇನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕೆ ವಂಚನೆ ಮಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…