ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ನಲ್ಲಿ ಒಂದೇ ಒಂದು ಜನಪರ ಯೋಜನೆಯೂ ಇಲ್ಲ ಎಂದು ಕಿಡಿಕಾರಿದರು.
ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳು ಕೂಡ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ.
ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು, ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂರು ಸಾಲ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಇನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕೆ ವಂಚನೆ ಮಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…