ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ. ಪ್ರತಿ ಬಾರಿಯೂ ದೊಡ್ಡ ದೊಡ್ಡ ಅಂಕಿ ಅಂಶಗಳನ್ನು ಹೊತ್ತು ತರುವ ನಿರ್ಮಲಾ ಸೀತಾರಾಮನ್ ಅವರು ಪ್ರತಿ ಬಾರಿಯೂ ತಾವೇ ಮಂಡಿಸಿದ ಬಜೆಟ್ ಅನ್ನು ಸಮರ್ಪಕವಾಗಿ ಜಾರಿ ಮಾಡದೇ ಇನ್ನೊಂದು ಬಜೆಟ್ ಮಂಡಿಸುವುದು ಅತ್ಯಂತ ಹಾಸ್ಯಾಸ್ಪದ ಸಂಗತಿ ಆಗಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿ ಆಡಳಿತ ಮಾಡುವ ಸರ್ಕಾರದ ರೀತಿ ನೀತಿಗಳು, ಅಲ್ಲಿನ ಜನರ ಆಶೋತ್ತರಗಳನ್ನು ಎಷ್ಟರ ಮಟ್ಟಿಗೆ ಈಡೇರಿಸಿದೆ ಎಂಬುದನ್ನು ಸರ್ಕಾರವು ಮಂಡಿಸುವAತಹ ಬಜೆಟ್ ಸೂಚ್ಯವಾಗಿ ಹೇಳುತ್ತದೆ. ಬಜೆಟ್ ಎಂದರೆ ಶ್ರೀಮಂತರ ಅನುಕೂಲಕ್ಕಾಗಿ ಇರುವ ವ್ಯವಸ್ಥೆ ಎಂದುಕೊAಡು ಬಜೆಟ್ ತಯಾರಿಸುವ ಕೇಂದ್ರ ಸರ್ಕಾರವು, ಕಾರ್ಪೊರೇಟ್ ಉದ್ಯಮಿಗಳಿಗೆ, ಎನ್ಆರ್ಐಗಳಿಗೆ ಮತ್ತು ಶ್ರೀಮಂತರಿಗೆ ಪೂರಕವಾಗಿ ಬಜೆಟ್ ರೂಪಿಸುತ್ತಿದೆಯೇ ವಿನಃ ಜನ ಸಾಮಾನ್ಯರ ಪರವಾಗಿ ಯಾವುದೇ ರೀತಿಯ ಯೋಜನೆಗಳನ್ನು ರೂಪಿಸದೇ ಇರುವುದು ಇವರ ಜನ ವಿರೋಽ ನೀತಿಗೆ ಹಿಡಿದ ಕನ್ನಡಿ ಎಂದಿದ್ದಾರೆ.
ದೇಶದ ಜನಸಂಖ್ಯೆಯಲ್ಲಿ ಶೇ.೨೪ ಇರುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಬಜೆಟ್ನಲ್ಲಿ ಏನಾದರೂ ಅನುಕೂಲ ಮಾಡಿದ್ದಾರಾ ಎಂದು ಹುಡುಕಿದರೆ, ಅಲ್ಲಿ ಎಂದಿನAತೆ ದೊಡ್ಡ ಸೊನ್ನೆಯೊಂದು ನಮಗೆ ಕಾಣುತ್ತಿದೆ. ಇನ್ನು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ಕಡೆಗಣಿಸಿದ್ದು ತಮ್ಮ ಕರ್ನಾಟಕ ವಿರೋಽ ನೀತಿಯನ್ನು ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆಂದು ನಿರೀಕ್ಷಿಸಿದ್ದ ಸುಮಾರು ೫,೦೦೦ ಕೋಟಿ ರೂ. ಅನುದಾನದ ಕನಿಷ್ಠ ಪ್ರಸ್ತಾಪವನ್ನೂ ಮಾಡದ ಕೇಂದ್ರ ಸರ್ಕಾರವು, ರೈತರಿಂದ ಬೆಂಬಲ ಬೆಲೆ ಅಡಿಯಲ್ಲಿ ಪಡೆದ ಉತ್ಪನ್ನಗಳಿಗೆ ನೀಡಬೇಕಿದ್ದ ೨,೪೬೧ ಕೋಟಿ ರೂ. ಬಗ್ಗೆ ಕನಿಷ್ಠ ಪ್ರಸ್ತಾಪ ಮಾಡದೇ ಇರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಜನ ಬದುಕನ್ನು ಮರೆತು ಮತ್ತೆ ೧೫ ಲಕ್ಷ ಕೋಟಿಗೂ ಹೆಚ್ಚಿನ ಸಾಲ ಮಾಡುತ್ತಿರುವ ಕೇಂದ್ರ ಸರ್ಕಾರ, ಆ ಹಣವನ್ನು ಯಾರಿಗೆ ನೀಡುತ್ತಿದೆ ಎಂಬುದೇ ನಿಗೂಢ ಪ್ರಶ್ನೆಯಾಗಿದೆ. ಎಲ್ಲ ಇಲಾಖೆಗಳನ್ನೂ ಪರಿಗಣಿಸದೆ. ಮನಸ್ಸಿಗೆ ಬಂದAತೆ ರಾಜಕೀಯ ಪ್ರೇರಿತವಾಗಿ ಹಣಕಾಸಿನ ಹಂಚಿಕೆ ಮಾಡಲಾಗಿದ್ದು ಇದರಿಂದ ದೇಶದ ವಿವಿಧ ಕ್ಷೇತ್ರಗಳಿಗೆ ಅನ್ಯಾಯ ಎಸಗಿಂತೆ ಆಗಿದೆ ಎಂದಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…