ರಾಜ್ಯ

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ. ಪ್ರತಿ ಬಾರಿಯೂ ದೊಡ್ಡ ದೊಡ್ಡ ಅಂಕಿ ಅಂಶಗಳನ್ನು ಹೊತ್ತು ತರುವ ನಿರ್ಮಲಾ ಸೀತಾರಾಮನ್ ಅವರು ಪ್ರತಿ ಬಾರಿಯೂ ತಾವೇ ಮಂಡಿಸಿದ ಬಜೆಟ್ ಅನ್ನು ಸಮರ್ಪಕವಾಗಿ ಜಾರಿ ಮಾಡದೇ ಇನ್ನೊಂದು ಬಜೆಟ್ ಮಂಡಿಸುವುದು ಅತ್ಯಂತ ಹಾಸ್ಯಾಸ್ಪದ ಸಂಗತಿ ಆಗಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ಆಡಳಿತ ಮಾಡುವ ಸರ್ಕಾರದ ರೀತಿ ನೀತಿಗಳು, ಅಲ್ಲಿನ ಜನರ ಆಶೋತ್ತರಗಳನ್ನು ಎಷ್ಟರ ಮಟ್ಟಿಗೆ ಈಡೇರಿಸಿದೆ ಎಂಬುದನ್ನು ಸರ್ಕಾರವು ಮಂಡಿಸುವAತಹ ಬಜೆಟ್ ಸೂಚ್ಯವಾಗಿ ಹೇಳುತ್ತದೆ. ಬಜೆಟ್ ಎಂದರೆ ಶ್ರೀಮಂತರ ಅನುಕೂಲಕ್ಕಾಗಿ ಇರುವ ವ್ಯವಸ್ಥೆ ಎಂದುಕೊAಡು ಬಜೆಟ್ ತಯಾರಿಸುವ ಕೇಂದ್ರ ಸರ್ಕಾರವು, ಕಾರ್ಪೊರೇಟ್ ಉದ್ಯಮಿಗಳಿಗೆ, ಎನ್‌ಆರ್‌ಐಗಳಿಗೆ ಮತ್ತು ಶ್ರೀಮಂತರಿಗೆ ಪೂರಕವಾಗಿ ಬಜೆಟ್ ರೂಪಿಸುತ್ತಿದೆಯೇ ವಿನಃ ಜನ ಸಾಮಾನ್ಯರ ಪರವಾಗಿ ಯಾವುದೇ ರೀತಿಯ ಯೋಜನೆಗಳನ್ನು ರೂಪಿಸದೇ ಇರುವುದು ಇವರ ಜನ ವಿರೋಽ ನೀತಿಗೆ ಹಿಡಿದ ಕನ್ನಡಿ ಎಂದಿದ್ದಾರೆ.

ದೇಶದ ಜನಸಂಖ್ಯೆಯಲ್ಲಿ ಶೇ.೨೪ ಇರುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಬಜೆಟ್‌ನಲ್ಲಿ ಏನಾದರೂ ಅನುಕೂಲ ಮಾಡಿದ್ದಾರಾ ಎಂದು ಹುಡುಕಿದರೆ, ಅಲ್ಲಿ ಎಂದಿನAತೆ ದೊಡ್ಡ ಸೊನ್ನೆಯೊಂದು ನಮಗೆ ಕಾಣುತ್ತಿದೆ. ಇನ್ನು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ಕಡೆಗಣಿಸಿದ್ದು ತಮ್ಮ ಕರ್ನಾಟಕ ವಿರೋಽ ನೀತಿಯನ್ನು ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆಂದು ನಿರೀಕ್ಷಿಸಿದ್ದ ಸುಮಾರು ೫,೦೦೦ ಕೋಟಿ ರೂ. ಅನುದಾನದ ಕನಿಷ್ಠ ಪ್ರಸ್ತಾಪವನ್ನೂ ಮಾಡದ ಕೇಂದ್ರ ಸರ್ಕಾರವು, ರೈತರಿಂದ ಬೆಂಬಲ ಬೆಲೆ ಅಡಿಯಲ್ಲಿ ಪಡೆದ ಉತ್ಪನ್ನಗಳಿಗೆ ನೀಡಬೇಕಿದ್ದ ೨,೪೬೧ ಕೋಟಿ ರೂ. ಬಗ್ಗೆ ಕನಿಷ್ಠ ಪ್ರಸ್ತಾಪ ಮಾಡದೇ ಇರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಜನ ಬದುಕನ್ನು ಮರೆತು ಮತ್ತೆ ೧೫ ಲಕ್ಷ ಕೋಟಿಗೂ ಹೆಚ್ಚಿನ ಸಾಲ ಮಾಡುತ್ತಿರುವ ಕೇಂದ್ರ ಸರ್ಕಾರ, ಆ ಹಣವನ್ನು ಯಾರಿಗೆ ನೀಡುತ್ತಿದೆ ಎಂಬುದೇ ನಿಗೂಢ ಪ್ರಶ್ನೆಯಾಗಿದೆ. ಎಲ್ಲ ಇಲಾಖೆಗಳನ್ನೂ ಪರಿಗಣಿಸದೆ. ಮನಸ್ಸಿಗೆ ಬಂದAತೆ ರಾಜಕೀಯ ಪ್ರೇರಿತವಾಗಿ ಹಣಕಾಸಿನ ಹಂಚಿಕೆ ಮಾಡಲಾಗಿದ್ದು ಇದರಿಂದ ದೇಶದ ವಿವಿಧ ಕ್ಷೇತ್ರಗಳಿಗೆ ಅನ್ಯಾಯ ಎಸಗಿಂತೆ ಆಗಿದೆ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

7 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

7 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

7 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

8 hours ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

9 hours ago