ರಾಜ್ಯ

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚೊಂಬು ಮಾತ್ರ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಬಜೆಟ್‌ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ವಿಶೇಷ ಅನುದಾನ ನೀಡಿದ್ದಾರೆ. ಈ ಬಜೆಟ್‌ನಲ್ಲಿ ರೈತರಿಗೆ ದೊಡ್ಡ ಅನ್ಯಾಯವಾಗಿದೆ. ಎಂಎಸ್‌ಪಿ ಕಾಯ್ದೆ ಬಗ್ಗೆ ಬಜೆಟ್‌ನಲ್ಲಿ ಚಕಾರವನ್ನೇ ಎತ್ತಿಲ್ಲ ಎಂದು ಕಿಡಿಕಾರಿದರು.

ಪ್ರಧಾನಮಂತ್ರಿಗಳ ಕುರ್ಚಿ ಉಳಿಸೋಕೆ ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದಾರೆ. ಈ ಮೂಲಕ ರಾಜ್ಯದ ನಿರೀಕ್ಷೆಯನ್ನು ಹುಸಿ ಮಾಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ನಿರ್ಮಲಾ ಸೀತಾರಾಮನ್‌ ವಿರುದ್ಧ ಗಂಭೀರ ಆರೋಪ ಮಾಡಿದರು.

ಐದು ಜನ ಕೇಂದ್ರ ಸಚಿವರು ರಾಜ್ಯದವರೇ ಆಗಿದ್ದಾರೆ. ಆದರೂ ಈ ಐದು ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಈ ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಏನೂ ಉಪಯೋಗವಾಗಿಲ್ಲ. ರೈತರಿಗಂತೂ ಈ ಬಜೆಟ್‌ನಿಂದ ಭಾರೀ ಅನ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

26 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

50 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

53 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

1 hour ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

1 hour ago