ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ವಿಶೇಷ ಅನುದಾನ ನೀಡಿದ್ದಾರೆ. ಈ ಬಜೆಟ್ನಲ್ಲಿ ರೈತರಿಗೆ ದೊಡ್ಡ ಅನ್ಯಾಯವಾಗಿದೆ. ಎಂಎಸ್ಪಿ ಕಾಯ್ದೆ ಬಗ್ಗೆ ಬಜೆಟ್ನಲ್ಲಿ ಚಕಾರವನ್ನೇ ಎತ್ತಿಲ್ಲ ಎಂದು ಕಿಡಿಕಾರಿದರು.
ಪ್ರಧಾನಮಂತ್ರಿಗಳ ಕುರ್ಚಿ ಉಳಿಸೋಕೆ ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದಾರೆ. ಈ ಮೂಲಕ ರಾಜ್ಯದ ನಿರೀಕ್ಷೆಯನ್ನು ಹುಸಿ ಮಾಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ವಿರುದ್ಧ ಗಂಭೀರ ಆರೋಪ ಮಾಡಿದರು.
ಐದು ಜನ ಕೇಂದ್ರ ಸಚಿವರು ರಾಜ್ಯದವರೇ ಆಗಿದ್ದಾರೆ. ಆದರೂ ಈ ಐದು ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಈ ಬಜೆಟ್ನಿಂದ ರಾಜ್ಯಕ್ಕೆ ಸಂಪೂರ್ಣ ಏನೂ ಉಪಯೋಗವಾಗಿಲ್ಲ. ರೈತರಿಗಂತೂ ಈ ಬಜೆಟ್ನಿಂದ ಭಾರೀ ಅನ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…