ಬೆಂಗಳೂರು: ನಾಳೆ(ಆ.29) 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾ 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ. 41 ರಿಂದ ಶೇ.50 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ನಿವೇಶನ ಹಂಚಿಕೆ ಕಾನೂನಾತ್ಮಕವಾಗಿದೆ
ರಾಹುಲ್ ಖರ್ಗೆಯವರ ಟ್ರಸ್ಟ್ ಗೆ ಸಿಎ ನಿವೇಶನ ಹಂಚಿಕೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿ, ಟ್ರಸ್ಟ್ ಗೆ ಕಾನೂನಾತ್ಮಕವಾಗಿ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್ ಎಸ್ ಎಸ್ ನ ವಿವಿಧ ಟ್ರಸ್ಟ್ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…