ಬೆಂಗಳೂರು: GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಈ ಕುರಿತು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲಿನ ಜೊತೆಗೆ ಬೆಂಗಳೂರಿನ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದರು.
ಬೆಂಗಳೂರಿನ ಮೆಟ್ರೋಗೆ ಶೇಕಡಾ.87ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ.
GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ತೀರಿ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದರು.
ಇದನ್ನು ಓದಿ: ಹುತಾತ್ಮ ಪೊಲೀಸರ ಸ್ಮರಣೆ ಎಲ್ಲರ ಕರ್ತವ್ಯವಾಗಿದೆ: ಮಂಜುಳಾ ಇಟ್ಟಿ
“ದೀಪಾವಳಿ ಗಿಫ್ಟ್” ಎಂದು ಜಾಹೀರಾತು ನೀಡಿರುವ ಮೋದಿ ಸರ್ಕಾರದ GST ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.
ಒಂದು ಲಕ್ಷದ 20 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದೀವಿ. ಕೇಂದ್ರದಿಂದ ನಯಾ ಪೈಸೆ ಕೊಡುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದರು.
ಇನ್ನು ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಸೇರಿ ಯಾರದ್ದೂ ಸ್ವಂತ ಮಾತು ಇಲ್ಲ. RSS ನವರು ಬರೆದುಕೊಟ್ಟಿದ್ದನ್ನು ಓದಿ ಹೋಗುವುದಷ್ಟೆ ಇವರ ಕೆಲಸ ಎಂದರು.
ವಿಧಾನಸಭಾ ಅಧಿವೇಶನ ವೇಳೆ ಒಮ್ಮೆ ಆರ್.ಅಶೋಕ್ ಗೆ ಕೇಳಿದ್ದೆ. ಆಗ ಆರ್.ಅಶೋಕ್ ಅವರು, “ಏನು ಮಾಡೋದು ಸರ್. RSS ನವರು ಒಬ್ರು ಬಂದು ಕೂತಿರ್ತಾರೆ. ಅವರು ಹೇಳಿದ್ದನ್ನು ಹೇಳದೇ ಹೋದರೆ ನಮ್ಮನ್ನು ಬಿಡಲ್ಲ ಸಾರ್” ಎಂದು ಉತ್ತರಿಸಿದ್ದರು ಎಂದು ವಿವರಿಸಿದರು.
ಇನ್ನು ಸಂಸದ ತೇಜಸ್ವಿ ಸೂರ್ಯ. ನಾನು ಇವರನ್ನು ಅಮವಾಸ್ಯೆ ಸೂರ್ಯ ಎಂದು ಕರಿತೀನಿ. ರಾಜ್ಯದ ಆಗುತ್ತಿರುವ ಅನ್ಯಾಯ, ದ್ರೋಹದ ಬಗ್ಗೆ ಅಮವಾಸೆ ಸೂರ್ಯ ಇವತ್ತಿನವರೆಗೆ ಬಾಯಿ ಬಿಟ್ಟಿದ್ದಾರಾ? ಸಚಿವರಾದ ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಅವರು ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಮೋಸ, ದ್ರೋಹದ ಬಗ್ಗೆ ಒಂದೇ ಒಂದು ದಿನ ಬಾಯಿ ಬಿಟ್ಟಿದ್ದಾರಾ? ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಅವರು ಗೆದ್ದ ಪಾರ್ಲಿಮೆಂಟ್ ಕ್ಷೇತ್ರಕ್ಕಾಗಲೀ ಏನು ಸಿಕ್ಕಿದೆ ಹೇಳಿ ಎಂದು ಪ್ರಶ್ನಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…