ಪಾಂಡಿಚೆರಿ : ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.
ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.
ರೈತರ ಕೃಷಿ ಭೂಮಿ ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದು ತಿಳಿಸದರು.
ಸಮಾವೇಶದಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ಪಾಂಡಿಚೇರಿ ರಾಜ್ಯದ ಮುಖ್ಯಸ್ಥರಾಗಿ ರಾಜೇಂದ್ರನ್ ರವರನ್ನು ಆಯ್ಕೆ ಮಾಡಲಾಯಿತು ಮುಖಂಡರುಗಳಾದ ಪಿ ಆರ್ ಪಾಂಡ್ಯನ್. ಲಕ್ವೀಂನ್ದರ್ ಸಿಂಗ್. ಕೇರಳದ
ಕೆ ವಿ ಬಿಜು. ತೆಲಂಗಾಣದ ವೆಂಕಟೇಶ್ವರರಾವ್. ಮಾತಾಡಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದರು.
ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲಾ. ಮತ್ತಿತರ ಮುಖಂಡರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು. ಸಿಖ್ ಧರ್ಮದ ಲಾಂಛನವನ್ನು ಬಳಸದೆ ವಿಮಾನ ಪ್ರವೇಶಿಸಬೇಕೆಂಬ ಖ್ಯಾತೆ ತೆಗೆದ ಪೊಲೀಸರು. ನಂತರ ಕಾಯ್ದಿರಿಸಿರುವ ವಿಮಾನ ಟಿಕೆಟ್ ರದ್ದುಗೊಳಿಸಿ. ವಾಮಮಾರ್ಗದ ಮೂಲಕ ಚಳುವಳಿಯನ್ನು ಹತ್ತಿಕುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ದಕ್ಷಿಣ ಭಾರತದಲ್ಲಿ ರೈತ ಚಳುವಳಿಯ ಪ್ರಾಬಲ್ಯವನ್ನು ತಡೆಯಲು ಯತ್ನಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ಅವಮಾನ ಮಾಡುತ್ತಿದ್ದಾರೆ. ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…