ರಾಜ್ಯ

ಕೇಂದ್ರ ಸರ್ಕಾರ ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರು ಶಾಂತಕುಮಾರ್

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.

ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.

ರೈತರ ಕೃಷಿ ಭೂಮಿ ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದು ತಿಳಿಸದರು.

ಸಮಾವೇಶದಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ಪಾಂಡಿಚೇರಿ ರಾಜ್ಯದ ಮುಖ್ಯಸ್ಥರಾಗಿ ರಾಜೇಂದ್ರನ್ ರವರನ್ನು ಆಯ್ಕೆ ಮಾಡಲಾಯಿತು ಮುಖಂಡರುಗಳಾದ ಪಿ ಆರ್ ಪಾಂಡ್ಯನ್. ಲಕ್ವೀಂನ್ದರ್ ಸಿಂಗ್. ಕೇರಳದ
ಕೆ ವಿ ಬಿಜು. ತೆಲಂಗಾಣದ ವೆಂಕಟೇಶ್ವರರಾವ್. ಮಾತಾಡಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲಾ. ಮತ್ತಿತರ ಮುಖಂಡರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು. ಸಿಖ್ ಧರ್ಮದ ಲಾಂಛನವನ್ನು ಬಳಸದೆ ವಿಮಾನ ಪ್ರವೇಶಿಸಬೇಕೆಂಬ ಖ್ಯಾತೆ ತೆಗೆದ ಪೊಲೀಸರು. ನಂತರ ಕಾಯ್ದಿರಿಸಿರುವ ವಿಮಾನ ಟಿಕೆಟ್ ರದ್ದುಗೊಳಿಸಿ. ವಾಮಮಾರ್ಗದ ಮೂಲಕ ಚಳುವಳಿಯನ್ನು ಹತ್ತಿಕುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ದಕ್ಷಿಣ ಭಾರತದಲ್ಲಿ ರೈತ ಚಳುವಳಿಯ ಪ್ರಾಬಲ್ಯವನ್ನು ತಡೆಯಲು ಯತ್ನಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ಅವಮಾನ ಮಾಡುತ್ತಿದ್ದಾರೆ. ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

55 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago