ರಾಜ್ಯ

ಕೇಂದ್ರ ಸರ್ಕಾರ ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರು ಶಾಂತಕುಮಾರ್

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.

ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.

ರೈತರ ಕೃಷಿ ಭೂಮಿ ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದು ತಿಳಿಸದರು.

ಸಮಾವೇಶದಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ಪಾಂಡಿಚೇರಿ ರಾಜ್ಯದ ಮುಖ್ಯಸ್ಥರಾಗಿ ರಾಜೇಂದ್ರನ್ ರವರನ್ನು ಆಯ್ಕೆ ಮಾಡಲಾಯಿತು ಮುಖಂಡರುಗಳಾದ ಪಿ ಆರ್ ಪಾಂಡ್ಯನ್. ಲಕ್ವೀಂನ್ದರ್ ಸಿಂಗ್. ಕೇರಳದ
ಕೆ ವಿ ಬಿಜು. ತೆಲಂಗಾಣದ ವೆಂಕಟೇಶ್ವರರಾವ್. ಮಾತಾಡಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲಾ. ಮತ್ತಿತರ ಮುಖಂಡರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು. ಸಿಖ್ ಧರ್ಮದ ಲಾಂಛನವನ್ನು ಬಳಸದೆ ವಿಮಾನ ಪ್ರವೇಶಿಸಬೇಕೆಂಬ ಖ್ಯಾತೆ ತೆಗೆದ ಪೊಲೀಸರು. ನಂತರ ಕಾಯ್ದಿರಿಸಿರುವ ವಿಮಾನ ಟಿಕೆಟ್ ರದ್ದುಗೊಳಿಸಿ. ವಾಮಮಾರ್ಗದ ಮೂಲಕ ಚಳುವಳಿಯನ್ನು ಹತ್ತಿಕುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ದಕ್ಷಿಣ ಭಾರತದಲ್ಲಿ ರೈತ ಚಳುವಳಿಯ ಪ್ರಾಬಲ್ಯವನ್ನು ತಡೆಯಲು ಯತ್ನಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ಅವಮಾನ ಮಾಡುತ್ತಿದ್ದಾರೆ. ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

4 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

6 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

9 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

13 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

17 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

17 hours ago