ರಾಜ್ಯ

ಕೇಂದ್ರ ಸರ್ಕಾರವು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇದರ ವಿರುದ್ದ ಕಾಂಗ್ರೆಸ್ ದೇಶಾದ್ಯಂತ ಅಭಿಯಾನವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರಗಳಲ್ಲಿ ಮತ ಕಳವು ಆಗಿರುವುದಕ್ಕೆ ಸಾಕ್ಷಿಗಳಿವೆ. ಕೆಪಿಸಿಸಿ ವತಿಯಿಂದ ನಡೆಸಿರುವ ಸಂಶೋಧನೆಯಿಂದ ಇದು ಸಾಬೀತಾಗಿದೆ. ಸೂಕ್ತ ಸಂದರ್ಭದಲ್ಲಿ ಆಯೋಗಕ್ಕೆ ಈ ಸಾಕ್ಷ್ಯಾಧಾರಗಳನ್ನು ಒದಗಿಸುವುದಾಗಿ ಹೇಳಿದ್ದಾರೆ.

ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ಚುನಾವಣಾ ಆಯೋಗದ ದುರ್ಬಳಕೆ, ಹೊಸದಾಗಿ ಸಮೀಕ್ಷೆ ನಡೆಸಲು ಉದ್ದೇಶಿಸಿರುವ ಜಾತಿಗಣತಿ, ಮುಡಾ ಪ್ರಕರಣ, ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರುಪಯೋಗ ಸೇರಿದಂತೆ ಮತ್ತಿತರ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಬಿಜೆಪಿಯ ದೊಡ್ಡ ಪ್ರಮಾಣದ ಚುನಾವಣಾ ದುರುಪಯೋಗದ ಬಗ್ಗೆ ರಾಹುಲ್ ಗಾಂಧಿ ಅವರ ಆರೋಪಗಳನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರದ ಆಡಳಿತ ಪಕ್ಷವು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡುತ್ತಿದೆ ಮತ್ತು ಭಾರತ ಚುನಾವಣಾ ಆಯೋಗ ಸೇರಿದಂತೆ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago