ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ.
ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.
ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ ಕರ್ನಾಟಕದಲ್ಲಿ ಈ ಮೊದಲು 6 ಜಿಲ್ಲೆಗಳಲ್ಲಿ ಆಧಾರ್ ಸೇವೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ಸೌಲಭ್ಯವನ್ನು ರಾಜ್ಯದ ಹೆಚ್ಚಿನ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಳಿದ ಪ್ರತಿ ಜಿಲ್ಲೆಗೂ ಒಂದರಂತೆ ರಾಜ್ಯಾದ್ಯಂತ 19 ಕೇಂದ್ರಗಳನ್ನು ಸ್ಥಾಪಿಸಲಾಯಿತು ಎಂದು ಮಾಹಿತಿ ನೀಡಿದರು.
ಆ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಮಾತ್ರ ಆಧಾರ್ ಕೇಂದ್ರ ಮುಂದುವರಿದಿತ್ತು. ಜಿಲ್ಲೆಗೆ ಒಂದೇ ಕೇಂದ್ರ ಎಂಬ ಹೊಸ ನಿಯಮದಂತೆ ಧಾರವಾಡದ ಕೇಂದ್ರವನ್ನು ಸ್ಥಗಿತಗೊಳಿಸಲಾಗಿತ್ತು. ನಾನು ಧಾರವಾಡ ಕೇಂದ್ರವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ಪ್ರಾರಂಭ ಮಾಡಬೇಕೆಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೃಷ್ಣವ್ ಅವರಿಗೆ ಪತ್ರ ನೀಡಿ ವಿನಂತಿಸಿದ್ದೆನು ಎಂದು ತಿಳಿಸಿದ್ದಾರೆ.
ಶಾಸಕ ಅರವಿಂದ್ ಬೆಲ್ಲದ್ ಅವರು ಸಹ ಧಾರವಾಡದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ನನಗೆ ವಿನಂತಿಸಿದ್ದರು. ಕೂಡಲೇ ನನ್ನ ಮಗುವಿಗೆ ಸ್ಪಂದಿಸಿ ಧಾರವಾಡ ಜಿಲ್ಲೆಗೆ ಅದರಲ್ಲಿಯೂ ಧಾರವಾಡದಲ್ಲಿ ಕೇಂದ್ರದ ಅವಶ್ಯಕತೆಯನ್ನು ಮನಗಂಡು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗ ಸೂಚನೆ ನೀಡಿದ್ದು, ಧಾರವಾಡದಲ್ಲಿಯೂ ಒಂದು ಕೇಂದ್ರವನ್ನು ವಿಶೇಷ ಪ್ರಕರಣದಡಿ ಸ್ಥಾಪಿಸುವಂತೆ ಆದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಭೇರ್ಯ ಮಹೇಶ್ ಎಸ್ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ ಕೆ.ಆರ್.ನಗರ: ಅತ್ಯುತ್ತಮ ಎಸ್ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ…
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…