ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ.
ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ ಹಾಗೂ ಇಡೀ ಯೋಜನೆ ಕಾರ್ಯಸಾಧ್ಯತೆಯ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.
ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ದೇವನಹಳ್ಳಿ ಕೈಗಾರಿಕಾ ಪ್ರದೇಶದ ಕುಡಿಯುವ ನೀರು ಒದಗಿರುವ ಉದ್ದೇಶದ ಈ ಯೋಜನೆಗೆ ಈವರೆಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದೆ.
ಪಶ್ಚಿಮ ಘಟ್ಟದ ಸೂಕ್ಷ್ಮ ಜೀವವೈವಿದ್ಯದ ಮೇಲೆ ಹಾನಿಯಾಗಿದೆ. ಇದಲ್ಲದೇ ಭೂಕುಸಿತದಿಂದ ಅನೇಕ ದುರಂತಗಳು ಸಂಭವಿಸಿವೆ. ಆದರೆ ಕುಡಿಯುವ ನೀರು ಒದಗಿಸುವ ಉದ್ದೇಶವೇ ಈಡೇರಿಲ್ಲ. ಬರಪೀಡಿತ ಪ್ರದೇಶಕ್ಕೆ ಹನಿ ನೀರು ಕೂಡ ಹರಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಸಚಿವಾಲಯ, ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಹೇಳಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…