ರಾಜ್ಯ

ಸಿದ್ದರಾಮಯ್ಯ ಮೇಲೆ ಗಣಿ ಆರೋಪ ಬಂದಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಾಂಬ್‌

ಬೆಂಗಳೂರು: ನನ್ನ ಮೇಲೆ ಗಣಿ, ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಮಮೂರ್ತಿ ಗೌಡ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಎಂದು ರಾಜ್ಯಪಾಲರ ಬಳಿ ಕೇಳಿದ್ದಾರೆ. ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ ₹500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರಕಾರದ ಬೊಕ್ಕಸಕ್ಕೆ ₹5,000 ಕೋಟಿ ನಷ್ಟ ಉಂಟು ಮಾಡಿರುವ ಗಂಭೀರ ಆಪಾದನೆಯನ್ನು ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ವಿಚಾರಣೆಗೆ ಅನುಮತಿ ನೀಡುವಂತೆ ರಾಮಮೂರ್ತಿ ಗೌಡ ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆನಪ್ಪ ಉತ್ತರ ಕೊಡುತ್ತೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡಿದರು.

ಅಲ್ಲಿ ನಾನು ಅಕ್ರಮವನ್ನೇ ಮಾಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಒಂದಿಚೂ ಮಣ್ಣು ಎತ್ತಿಲ್ಲ ಎಂದು ಹೇಳಿದ್ದಾರೆ. ಅವರು ಅಕ್ರಮ ಮಾಡಿದ್ದಾರೋ ಸಕ್ರಮ ಮಾಡಿದ್ದಾರೋ ಎನ್ನುವುದು ನನಗೆ ಗೊತ್ತಿದೆ. ಅದರ ಬಗ್ಗೆ ದಾಖಲೆಗಳೂ ನನ್ನಲ್ಲಿ ಇವೆ ಎಂದರು.

ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

1 hour ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

1 hour ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

1 hour ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

1 hour ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

2 hours ago