ರಾಜ್ಯ

ಸಿದ್ದರಾಮಯ್ಯ ಮೇಲೆ ಗಣಿ ಆರೋಪ ಬಂದಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಾಂಬ್‌

ಬೆಂಗಳೂರು: ನನ್ನ ಮೇಲೆ ಗಣಿ, ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಮಮೂರ್ತಿ ಗೌಡ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಎಂದು ರಾಜ್ಯಪಾಲರ ಬಳಿ ಕೇಳಿದ್ದಾರೆ. ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ ₹500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರಕಾರದ ಬೊಕ್ಕಸಕ್ಕೆ ₹5,000 ಕೋಟಿ ನಷ್ಟ ಉಂಟು ಮಾಡಿರುವ ಗಂಭೀರ ಆಪಾದನೆಯನ್ನು ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ವಿಚಾರಣೆಗೆ ಅನುಮತಿ ನೀಡುವಂತೆ ರಾಮಮೂರ್ತಿ ಗೌಡ ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆನಪ್ಪ ಉತ್ತರ ಕೊಡುತ್ತೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡಿದರು.

ಅಲ್ಲಿ ನಾನು ಅಕ್ರಮವನ್ನೇ ಮಾಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಒಂದಿಚೂ ಮಣ್ಣು ಎತ್ತಿಲ್ಲ ಎಂದು ಹೇಳಿದ್ದಾರೆ. ಅವರು ಅಕ್ರಮ ಮಾಡಿದ್ದಾರೋ ಸಕ್ರಮ ಮಾಡಿದ್ದಾರೋ ಎನ್ನುವುದು ನನಗೆ ಗೊತ್ತಿದೆ. ಅದರ ಬಗ್ಗೆ ದಾಖಲೆಗಳೂ ನನ್ನಲ್ಲಿ ಇವೆ ಎಂದರು.

ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago