ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 60% ಕಮಿಷನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ
ಸರ್ಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು, ಕಾಂಗ್ರೆಸ್ ಸರ್ಕಾರದಲ್ಲೂ 40% ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾದ ಆರೋಪ ಎಂದು ಟಾಂಗ್ ನೀಡಿದರು.
ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದ್ದು, ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಕೇಳಿದ್ದಾರೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…