ರಾಜ್ಯ

ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಕಿಡಿಕಾರಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರ್ಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು. ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವೇ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಅದಕ್ಕೆ ಸರ್ಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದಿರುವ ಅವರು, ಸಿದ್ದರಾಮಯ್ಯ ಅವರನ್ನು ಸರ್ವಾಧಿಕಾರಿ ಎಂದು ಕರೆದು, ಸರ್ಕಾರವನ್ನು ತುಘಲಕ್ ಸರ್ಕಾರ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

2 hours ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

2 hours ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

2 hours ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

15 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

15 hours ago