H D Kumaraswamy
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ ೪-೫ ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ ಎಂಬ ಅಂಶವನ್ನು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ಹೆಮ್ಮರವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಕುಮಾರಸ್ವಾಮಿ ಸಿಎಂ ಅವರನ್ನು ಕೋರಿದ್ದಾರೆ.
ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…