ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಂಎಲ್ಸಿ ಟಿಕೆಟ್ಗಾಗಿ 2 ಕೋಟಿಗೂ ಅಧಿಕ ಹಣ ಪಡೆದು ಗೋಪಾಲ್ ಜೋಶಿ ಅನೇಕರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಗೋಪಾಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಆಪ್ತರ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿತ್ತು. ಬಳಿಕ ಹುಡುಕಾಟ ಆರಂಭಿಸಿದ ಪೊಲೀಸರು ಬೆಳಗಾವಿಯಲ್ಲಿ ಗೋಪಾಲ್ರನ್ನು ಬಂಧಿಸಿದ್ದಾರೆ.





