ರಾಜ್ಯ

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭಯೋತ್ಪಾದಕ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ ಮಾಡಲು ಆಗಲ್ಲ ಎಂದು ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯಬೇಕೆಂದು ನಿರ್ಧರಿಸಿದೆ. ಬಳಿಕ, ಸಂಪುಟದ ನಿರ್ಧಾರ ನ್ಯಾಯಾಲಯದ ಮುಂದೆ ಹೋಗಬೇಕು. ನ್ಯಾಯಾಲಯ ಒಪ್ಪಿದರೆ ಮಾತ್ರ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಂತೆ ಆಗುತ್ತದೆ ಎಂದರು.

ಈ ಪ್ರಕರಣದ ಬಗ್ಗೆ ಬಿಜೆಪಿ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ನ್ಯಾಯಾಲಯದಲ್ಲಿ ಸುಳ್ಳು ಕೇಸ್‌ ಇದ್ದರೆ ಅಥವಾ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ ಹಾಗೂ ಹೋರಾಟ ಮಾಡಿದಾಗ ಪ್ರಕರಣ ದಾಖಲಾಗಿದ್ದರೆ ಅಂತಹ ಕೇಸ್‌ಗಳನ್ನು ಹಿಂಪಡೆಯುವ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಬಗ್ಗೆ ಮಾತನಾಡಿದ ಅವರು, ಜೋಶಿ ಓರ್ವ ಭಯೋತ್ಪಾದಕ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago