ರಾಜ್ಯ

ರಾಜ್ಯ ಸರ್ಕಾರದ ಪೌರುಷ ಹಿಂದೂ ಹಬ್ಬಗಳಿಗೆ ಮಾತ್ರ ಸೀಮಿತ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಹಿಂದೂ ಹಬ್ಬಗಳಲ್ಲಿ ಮಾತ್ರ ಡಿಜೆ ಹಾಕಲು, ಗಣೇಶ ವಿಗ್ರಹ ವಿಸರ್ಜಿಸುವ ವೇಳೆ ಮೆರವಣಿಗೆ ನಡೆಸಲು ಹಾಗೂ ಪಟಾಕಿ ಸಿಡಿಸಲುನೀತಿ ಹಾಗೂ ನಿಯಮಗಳನ್ನು ಹೇರುತ್ತಿದೆ. ಆದರೆ, ಮಸೀದಿಗಳಲ್ಲಿ ಬೆಳಿಗ್ಗೆ 5 ಗಂಟೆಗೆ ಎದ್ದು ನಮಾಝ್‌ ಪ್ರಾರಂಭ ಮಾಡುತ್ತಾರೆ. ಅವರಿಗೆ ಯಾಕೆ ಈ ಸರ್ಕಾರದ ನೀತಿ ಮತ್ತು ನಿಯಮ ಅನ್ವಯಿಸುವುದಿಲ್ಲ ಎಂದು ಪ್ರಶ್ನೆ ಮಾಡಿದರು.

ಯಾರು ಏನೇ ಮಾಡಿದರೂ ಪಟಾಕಿ ಹೊಡೆಯುವುದನ್ನೂ ತಡೆಯಲು ಸಾಧ್ಯವಿಲ್ಲ. ಅದರ ಪಾಡಿಗೆ ಅದು ನಡೆಯುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

22 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

25 mins ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

27 mins ago

‘ಮಾದಾರಿ ಮಾದಯ್ಯ’ ವರ್ತಮಾನದ ಅವಶ್ಯ ರಂಗ ಪ್ರಯೋಗ

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…

1 hour ago

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

4 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

4 hours ago