ರಾಜ್ಯ

ಸಚಿವ ಭೈರತಿ ಸುರೇಶ್‌ಗೆ ಸವಾಲು ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಳಗಾವಿ: ಸಚಿವ ಭೈರತಿ ಸುರೇಶ್‌ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ವಿಚಾರ ರಾಜ್ಯದಲ್ಲಿ ಬಹಿರಂಗವಾಗುತ್ತಿದಂತೆ ಸಚಿವ ಭೈರತಿ ಸುರೇಶ್‌ ಅವರು ಹೆಲಿಕಾಫ್ಟರ್‌ ಮೂಲಕ ತೆರಳಿ, ಮುಡಾ ಹಗರಣದ ಸಾವಿರಾರು ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ನಾನು ಧ್ವನಿ ಎತ್ತಿದ್ದೇನೆ. ಹೀಗಾಗಿ ಭೈರತಿ ಸುರೇಶ್‌ ತಮ್ಮ ಬಂಡವಾಳ ಬಯಲಾಗುತ್ತದೆ ಎಂಬ ಕಾರಣಕ್ಕೆ ನನ್ನ ಬಗ್ಗೆ ವೈಯಕ್ತಿಕವಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾನು ಸುರೇಶ್‌ರಂತೆ ಲೂಟಿ ಮಾಡಲು ಬಂದಿಲ್ಲ. ಭ್ರಷ್ಟಾಚಾರದ ಬಗ್ಗೆ ನನ್ನ ವಿರುದ್ಧ ಯಾವುದೇ ದಾಖಲೆಗಳಿದ್ದರೂ ಅದನ್ನು ಬಿಡುಗಡೆ ಮಾಡಲಿ. ನಾನು ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ, ಮಾಡೋದೋ ಇಲ್ಲ. ಒಂದು ವೇಳೆ ಸುರೇಶ್‌ ಅವರ ಹತ್ತಿರ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಈಗಾಗಲೇ ನನ್ನ ವಿರುದ್ಧ ದಾಖಲೆ ಬಹಿರಂಗ ವಿಚಾರವಾಗಿ ಪೊನ್ನಣ್ಣ ಅವರನ್ನು ನೇಮಕ ಮಾಡಿದ್ದಾರೆ. ಪೊನ್ನಣ್ಣ ಇರುವುದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ. ವಿದ್ಯುತ್‌ ಇಲಾಖೆಗೂ ಪೊನ್ನಣ್ಣ ಅವರಿಗೂ ಏನು ಸಂಬಂಧ ಎಂಬುದು ತಿಳಿಯುತ್ತಿಲ್ಲ. ಬಹುಶಃ ನನ್ನ ವಿರುದ್ಧ ಫೇಕ್‌ ಫೈಲ್‌ ಕ್ರಿಯೆಟ್‌ ಮಾಡಲು ಪೊನ್ನಣ್ಣರಿಗೆ ಜವಾಬ್ದಾರಿ ನೀಡಿ ಮತ್ತೊಂದು ಭ್ರಷ್ಟಾಚಾರ ಮಾಡಲು ಹೊರಟ್ಟಿದ್ದಾರೆ. ಸತ್ಯವಾಗಿಯೂ ನನ್ನ ವಿರುದ್ಧ ದಾಖಲೆಗಳಿದ್ದರೆ ತಕ್ಷಣ ಬಿಡುಗಡೆ ಮಾಡಿ ನೋಡೋಣ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಹಾಗೂ ಇ.ಡಿ ತನಿಖಾ ಸಂಸ್ಥೆಗಳ ತನಿಖೆ ಚುರುಕಾಗಿದೆ. ಹೀಗಾಗಿ ಆ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ಈಗಲೂ ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮುಡಾ ಕಚೇರಿಯಿಂದ ದಾಖಲೆಗಳನ್ನು ಸುರೇಶ್‌ ಅವರೇ ತಂದು ಸುಟ್ಟು ಹಾಕಿದ್ದಾರೆ ಎಂದು ಪುನರುಚ್ಚರಿಸುವ ಮೂಲಕ ಭೈರತಿ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

7 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago