ಬೆಳಗಾವಿ: ಸಚಿವ ಭೈರತಿ ಸುರೇಶ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ವಿಚಾರ ರಾಜ್ಯದಲ್ಲಿ ಬಹಿರಂಗವಾಗುತ್ತಿದಂತೆ ಸಚಿವ ಭೈರತಿ ಸುರೇಶ್ ಅವರು ಹೆಲಿಕಾಫ್ಟರ್ ಮೂಲಕ ತೆರಳಿ, ಮುಡಾ ಹಗರಣದ ಸಾವಿರಾರು ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ನಾನು ಧ್ವನಿ ಎತ್ತಿದ್ದೇನೆ. ಹೀಗಾಗಿ ಭೈರತಿ ಸುರೇಶ್ ತಮ್ಮ ಬಂಡವಾಳ ಬಯಲಾಗುತ್ತದೆ ಎಂಬ ಕಾರಣಕ್ಕೆ ನನ್ನ ಬಗ್ಗೆ ವೈಯಕ್ತಿಕವಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಸುರೇಶ್ರಂತೆ ಲೂಟಿ ಮಾಡಲು ಬಂದಿಲ್ಲ. ಭ್ರಷ್ಟಾಚಾರದ ಬಗ್ಗೆ ನನ್ನ ವಿರುದ್ಧ ಯಾವುದೇ ದಾಖಲೆಗಳಿದ್ದರೂ ಅದನ್ನು ಬಿಡುಗಡೆ ಮಾಡಲಿ. ನಾನು ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ, ಮಾಡೋದೋ ಇಲ್ಲ. ಒಂದು ವೇಳೆ ಸುರೇಶ್ ಅವರ ಹತ್ತಿರ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಈಗಾಗಲೇ ನನ್ನ ವಿರುದ್ಧ ದಾಖಲೆ ಬಹಿರಂಗ ವಿಚಾರವಾಗಿ ಪೊನ್ನಣ್ಣ ಅವರನ್ನು ನೇಮಕ ಮಾಡಿದ್ದಾರೆ. ಪೊನ್ನಣ್ಣ ಇರುವುದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ. ವಿದ್ಯುತ್ ಇಲಾಖೆಗೂ ಪೊನ್ನಣ್ಣ ಅವರಿಗೂ ಏನು ಸಂಬಂಧ ಎಂಬುದು ತಿಳಿಯುತ್ತಿಲ್ಲ. ಬಹುಶಃ ನನ್ನ ವಿರುದ್ಧ ಫೇಕ್ ಫೈಲ್ ಕ್ರಿಯೆಟ್ ಮಾಡಲು ಪೊನ್ನಣ್ಣರಿಗೆ ಜವಾಬ್ದಾರಿ ನೀಡಿ ಮತ್ತೊಂದು ಭ್ರಷ್ಟಾಚಾರ ಮಾಡಲು ಹೊರಟ್ಟಿದ್ದಾರೆ. ಸತ್ಯವಾಗಿಯೂ ನನ್ನ ವಿರುದ್ಧ ದಾಖಲೆಗಳಿದ್ದರೆ ತಕ್ಷಣ ಬಿಡುಗಡೆ ಮಾಡಿ ನೋಡೋಣ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಹಾಗೂ ಇ.ಡಿ ತನಿಖಾ ಸಂಸ್ಥೆಗಳ ತನಿಖೆ ಚುರುಕಾಗಿದೆ. ಹೀಗಾಗಿ ಆ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ಈಗಲೂ ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮುಡಾ ಕಚೇರಿಯಿಂದ ದಾಖಲೆಗಳನ್ನು ಸುರೇಶ್ ಅವರೇ ತಂದು ಸುಟ್ಟು ಹಾಕಿದ್ದಾರೆ ಎಂದು ಪುನರುಚ್ಚರಿಸುವ ಮೂಲಕ ಭೈರತಿ ವಿರುದ್ಧ ಕಿಡಿಕಾರಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…