ಬೆಳಗಾವಿ: ಸಚಿವ ಭೈರತಿ ಸುರೇಶ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ವಿಚಾರ ರಾಜ್ಯದಲ್ಲಿ ಬಹಿರಂಗವಾಗುತ್ತಿದಂತೆ ಸಚಿವ ಭೈರತಿ ಸುರೇಶ್ ಅವರು ಹೆಲಿಕಾಫ್ಟರ್ ಮೂಲಕ ತೆರಳಿ, ಮುಡಾ ಹಗರಣದ ಸಾವಿರಾರು ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ನಾನು ಧ್ವನಿ ಎತ್ತಿದ್ದೇನೆ. ಹೀಗಾಗಿ ಭೈರತಿ ಸುರೇಶ್ ತಮ್ಮ ಬಂಡವಾಳ ಬಯಲಾಗುತ್ತದೆ ಎಂಬ ಕಾರಣಕ್ಕೆ ನನ್ನ ಬಗ್ಗೆ ವೈಯಕ್ತಿಕವಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಸುರೇಶ್ರಂತೆ ಲೂಟಿ ಮಾಡಲು ಬಂದಿಲ್ಲ. ಭ್ರಷ್ಟಾಚಾರದ ಬಗ್ಗೆ ನನ್ನ ವಿರುದ್ಧ ಯಾವುದೇ ದಾಖಲೆಗಳಿದ್ದರೂ ಅದನ್ನು ಬಿಡುಗಡೆ ಮಾಡಲಿ. ನಾನು ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ, ಮಾಡೋದೋ ಇಲ್ಲ. ಒಂದು ವೇಳೆ ಸುರೇಶ್ ಅವರ ಹತ್ತಿರ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಈಗಾಗಲೇ ನನ್ನ ವಿರುದ್ಧ ದಾಖಲೆ ಬಹಿರಂಗ ವಿಚಾರವಾಗಿ ಪೊನ್ನಣ್ಣ ಅವರನ್ನು ನೇಮಕ ಮಾಡಿದ್ದಾರೆ. ಪೊನ್ನಣ್ಣ ಇರುವುದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ. ವಿದ್ಯುತ್ ಇಲಾಖೆಗೂ ಪೊನ್ನಣ್ಣ ಅವರಿಗೂ ಏನು ಸಂಬಂಧ ಎಂಬುದು ತಿಳಿಯುತ್ತಿಲ್ಲ. ಬಹುಶಃ ನನ್ನ ವಿರುದ್ಧ ಫೇಕ್ ಫೈಲ್ ಕ್ರಿಯೆಟ್ ಮಾಡಲು ಪೊನ್ನಣ್ಣರಿಗೆ ಜವಾಬ್ದಾರಿ ನೀಡಿ ಮತ್ತೊಂದು ಭ್ರಷ್ಟಾಚಾರ ಮಾಡಲು ಹೊರಟ್ಟಿದ್ದಾರೆ. ಸತ್ಯವಾಗಿಯೂ ನನ್ನ ವಿರುದ್ಧ ದಾಖಲೆಗಳಿದ್ದರೆ ತಕ್ಷಣ ಬಿಡುಗಡೆ ಮಾಡಿ ನೋಡೋಣ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಹಾಗೂ ಇ.ಡಿ ತನಿಖಾ ಸಂಸ್ಥೆಗಳ ತನಿಖೆ ಚುರುಕಾಗಿದೆ. ಹೀಗಾಗಿ ಆ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ಈಗಲೂ ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮುಡಾ ಕಚೇರಿಯಿಂದ ದಾಖಲೆಗಳನ್ನು ಸುರೇಶ್ ಅವರೇ ತಂದು ಸುಟ್ಟು ಹಾಕಿದ್ದಾರೆ ಎಂದು ಪುನರುಚ್ಚರಿಸುವ ಮೂಲಕ ಭೈರತಿ ವಿರುದ್ಧ ಕಿಡಿಕಾರಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…