ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿಯಾಗಿದ್ದು, ಮುಡಾ ಪ್ರಕರಣದ ಬಗ್ಗೆ ಸ್ವಾಮರಸ್ಯಕರ ಚರ್ಚೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿಂದು ಬೆಳಗಿನ ಉಪಹಾರಕ್ಕಾಗಿ ಮುಖಾಮುಖಿಯಾದ ಉಭಯ ನಾಯಕರು ನಗುನಗುತ್ತಲೇ ಮುಡಾ ಪ್ರಕರಣದ ಕುರಿತು ಚರ್ಚೆ ಮಾಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾತನಾಡಿ, ಸಿದ್ದರಾಮಣ್ಣ ಹಾಗೂ ನನ್ನ ನಡುವೆ ಯಾವುದೇ ಮುಚ್ಚು ಮರೆಯಿಲ್ಲ. ನಂದು ಏನಿದ್ದರೂ ನೇರ ಮಾತುಕತೆ. ಬೇರೆಯವರಿಗೆ ಹೆದರಿಸುವ ಹಾಗೇ ಹಿಂದೊಂದು ಮುಂದೊಂದು ರೀತಿಯಲ್ಲಿ ಕುತಂತ್ರ ಮಾಡಿದವನಲ್ಲ. ಅದರ ಬಗ್ಗೆಯೂ ನನಗೆ ತಿಳಿದಿಲ್ಲ. ಸಿದ್ದರಾಮಯ್ಯ ಅವರು ನನ್ನ ಮಾತು ಕೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಮುಡಾದ ಕೇವಲ 14 ನಿವೇಶನಗಳಿಗಾಗಿ ಇಷ್ಟೆಲ್ಲಾ ಆಗುತ್ತಿದೆ. ಅಂದೇ ನನ್ನ ಮಾತು ಕೇಳಿ ನಿವೇಶನಗಳನ್ನು ಹಿಂದಿರುಗಿಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.
ಬಳಿಕ ಸೋಮಣ್ಣನವರ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಆಗಲ್ಲ ಕೇಳಯ್ಯಾ ಇಲ್ಲಿ. ಭೂ ಸುಧಾರಣೆ ಕಾಯ್ದೆ ಇದ್ದಂತೆ ಪ್ರಕ್ರಿಯೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ನನ್ನದಂತೂ ಏನೂ ತಪ್ಪಿಲ್ಲ. ಸುಮ್ಮನೆ ಗೊತ್ತಿಲ್ಲದೇ ಏನೇನೋ ಮಾತನಾಡಬೇಡ ಎಂದು ಅಪಹಾಸ್ಯ ಮಾಡಿದರು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…