ಬೆಂಗಳೂರು: ನಗರದ ಖಾಸಗಿ ಹೋಟೆಲ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿಯಾಗಿದ್ದು, ಮುಡಾ ಪ್ರಕರಣದ ಬಗ್ಗೆ ಸ್ವಾಮರಸ್ಯಕರ ಚರ್ಚೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿಂದು ಬೆಳಗಿನ ಉಪಹಾರಕ್ಕಾಗಿ ಮುಖಾಮುಖಿಯಾದ ಉಭಯ ನಾಯಕರು ನಗುನಗುತ್ತಲೇ ಮುಡಾ ಪ್ರಕರಣದ ಕುರಿತು ಚರ್ಚೆ ಮಾಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾತನಾಡಿ, ಸಿದ್ದರಾಮಣ್ಣ ಹಾಗೂ ನನ್ನ ನಡುವೆ ಯಾವುದೇ ಮುಚ್ಚು ಮರೆಯಿಲ್ಲ. ನಂದು ಏನಿದ್ದರೂ ನೇರ ಮಾತುಕತೆ. ಬೇರೆಯವರಿಗೆ ಹೆದರಿಸುವ ಹಾಗೇ ಹಿಂದೊಂದು ಮುಂದೊಂದು ರೀತಿಯಲ್ಲಿ ಕುತಂತ್ರ ಮಾಡಿದವನಲ್ಲ. ಅದರ ಬಗ್ಗೆಯೂ ನನಗೆ ತಿಳಿದಿಲ್ಲ. ಸಿದ್ದರಾಮಯ್ಯ ಅವರು ನನ್ನ ಮಾತು ಕೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಮುಡಾದ ಕೇವಲ 14 ನಿವೇಶನಗಳಿಗಾಗಿ ಇಷ್ಟೆಲ್ಲಾ ಆಗುತ್ತಿದೆ. ಅಂದೇ ನನ್ನ ಮಾತು ಕೇಳಿ ನಿವೇಶನಗಳನ್ನು ಹಿಂದಿರುಗಿಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.
ಬಳಿಕ ಸೋಮಣ್ಣನವರ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಆಗಲ್ಲ ಕೇಳಯ್ಯಾ ಇಲ್ಲಿ. ಭೂ ಸುಧಾರಣೆ ಕಾಯ್ದೆ ಇದ್ದಂತೆ ಪ್ರಕ್ರಿಯೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ನನ್ನದಂತೂ ಏನೂ ತಪ್ಪಿಲ್ಲ. ಸುಮ್ಮನೆ ಗೊತ್ತಿಲ್ಲದೇ ಏನೇನೋ ಮಾತನಾಡಬೇಡ ಎಂದು ಅಪಹಾಸ್ಯ ಮಾಡಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…