ಮಂಡ್ಯ: ಕೆಆರ್ಎಸ್ (ಕೃಷ್ಣರಾಜ ಸಾಗರ) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಇಂದು ಕೆಆರ್ಎಸ್ ಜಲಾಶಕ್ಕೆ ಭೇಟಿ ನೀಡಿ, ಕಾವೇರಿ ತಾಯಿಗೆಪೂಜೆ ಸಲ್ಲಿಸಿದ ನಂತರ ಕೆಆರ್ಎಸ್ ಡ್ಯಾಂ ವೀಕ್ಷಣೆ ಮಾಡಿದ್ದಾರೆ. ಸಂಸದೀಯ ಸಮಿತಿ ಭೇಟಿ ನೀಡಿದ ವೇಳೆ ಸಂಸದೆ ಸುಮಲತಾ ಅಂಬರೀಶ್ ಅವರು ಗೈರಾಗಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿಯ 17 ಸದಸ್ಯರ ಪೈಕಿ 14 ಜನರು ಕೆಆರ್ಎಸ್ಗೆ ಭೇಟಿ ನೀಡಿದ್ದರು.





