ದಾವಣಗೆರೆ : ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಇದರಲ್ಲಿ ಆರ್ಥಿಕ ಪರಿಸ್ಥಿತಿಯ ದಾಖಲೆ ಇರುವುದಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ನಾವು ಮರು ಸಮೀಕ್ಷೆ ಅಗತ್ಯತೆಯನ್ನು ಮನಗಂಡು ಮರು ಸಮೀಕ್ಷೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.
ಇದನ್ನೂ ಓದಿ:– ಜನರನ್ನು ಡೈವರ್ಟ್ ಮಾಡೋದೆ ಸಿಎಂ ಸಿದ್ದರಾಮಯ್ಯ ಕೆಲಸ: ಶಾಸಕ ಟಿ.ಎಸ್.ಶ್ರೀವತ್ಸ
ಕಾಯ್ದೆಯ ಪ್ರಕಾರ ಮರುಗಣತಿ
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…