ರಾಜ್ಯ

ಗಣತಿ ಕಾರ್ಯ ಮಾಡದೇ ಅನ್ಯಾಯ ಮಾಡುತ್ತಿರುವ ಕೇಂದ್ರ : ಸಚಿವ ಮಹದೇವಪ್ಪ ಆರೋಪ

ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ ನಡೆಯಬೇಕು. 2011 ರಲ್ಲಿ ಗಣತಿಯಾಗಿದ್ದು 14 ವರ್ಷ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿಗೆ ಗಣತಿ ಅತ್ಯಗತ್ಯ
ಸರ್ಕಾರಗಳು ಸಾಮಾಜಿಕ ನ್ಯಾಯದ ಬದ್ಧತೆಗೆ ಒಳಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಮೂಲಕ ಸೌಲಭ್ಯಗಳನ್ನು ನೀಡಬೇಕು. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಸೇರಿದಂತೆ ಇತರ ಕೆಲಸಗಳಿಗಾಗಿ ಜನಗಣತಿ ಅತ್ಯಗತ್ಯವಾಗಿದೆ. 2021 ರಲ್ಲಿ ಕೋವಿಡ್ ಸಮಸ್ಯೆ ಇತ್ತು ಎಂಬ ನೆಪ ಹೇಳುತ್ತಿದ್ದರು. ಎಲ್ಲವೂ ಮುಗಿದು ಮೂರು ವರ್ಷವಾದರೂ ಈವರೆಗೂ ಜನಗಣತಿ ಶುರುವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಜನರಿಗೆ ಸಿಗುವ ಸಾಂವಿಧಾನಿಕ ಸೌಲಭ್ಯಗಳಿಂದ ವಂಚಿಸಬಾರದು ಎಂಬ ಕಾರಣಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. 2015 ರಲ್ಲಿ ನಡೆಸಲಾದ ಸಮೀಕ್ಷೆಗೆ 10 ವರ್ಷವಾಗಿದೆ ಎಂಬ ಕಾರಣಕ್ಕಾಗಿ ಮತ್ತೊಮ್ಮೆ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದು ಅರ್ಥಪೂರ್ಣವಾದ ಕಾರ್ಯಕ್ರಮ. ಬಿಜೆಪಿಯವರು ಒಕ್ಕೂಟ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸಂವಿಧಾನಬದ್ಧವಾದ ಹಕ್ಕುಗಳ ಬಗ್ಗೆ ಅವರಿಗೆ ಅಸಡ್ಡೆ ಇದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

3 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

7 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

7 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

7 hours ago