ರಾಜ್ಯ

ಗಣತಿ ಕಾರ್ಯ ಮಾಡದೇ ಅನ್ಯಾಯ ಮಾಡುತ್ತಿರುವ ಕೇಂದ್ರ : ಸಚಿವ ಮಹದೇವಪ್ಪ ಆರೋಪ

ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ ನಡೆಯಬೇಕು. 2011 ರಲ್ಲಿ ಗಣತಿಯಾಗಿದ್ದು 14 ವರ್ಷ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿಗೆ ಗಣತಿ ಅತ್ಯಗತ್ಯ
ಸರ್ಕಾರಗಳು ಸಾಮಾಜಿಕ ನ್ಯಾಯದ ಬದ್ಧತೆಗೆ ಒಳಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಮೂಲಕ ಸೌಲಭ್ಯಗಳನ್ನು ನೀಡಬೇಕು. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಸೇರಿದಂತೆ ಇತರ ಕೆಲಸಗಳಿಗಾಗಿ ಜನಗಣತಿ ಅತ್ಯಗತ್ಯವಾಗಿದೆ. 2021 ರಲ್ಲಿ ಕೋವಿಡ್ ಸಮಸ್ಯೆ ಇತ್ತು ಎಂಬ ನೆಪ ಹೇಳುತ್ತಿದ್ದರು. ಎಲ್ಲವೂ ಮುಗಿದು ಮೂರು ವರ್ಷವಾದರೂ ಈವರೆಗೂ ಜನಗಣತಿ ಶುರುವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಜನರಿಗೆ ಸಿಗುವ ಸಾಂವಿಧಾನಿಕ ಸೌಲಭ್ಯಗಳಿಂದ ವಂಚಿಸಬಾರದು ಎಂಬ ಕಾರಣಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. 2015 ರಲ್ಲಿ ನಡೆಸಲಾದ ಸಮೀಕ್ಷೆಗೆ 10 ವರ್ಷವಾಗಿದೆ ಎಂಬ ಕಾರಣಕ್ಕಾಗಿ ಮತ್ತೊಮ್ಮೆ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದು ಅರ್ಥಪೂರ್ಣವಾದ ಕಾರ್ಯಕ್ರಮ. ಬಿಜೆಪಿಯವರು ಒಕ್ಕೂಟ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸಂವಿಧಾನಬದ್ಧವಾದ ಹಕ್ಕುಗಳ ಬಗ್ಗೆ ಅವರಿಗೆ ಅಸಡ್ಡೆ ಇದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago