ರಾಜ್ಯ

ಜಿಎಸ್‌ಟಿ ನೋಟೀಸ್‌ ಹಿಂದೆ ಕೇಂದ್ರದ ಪಾತ್ರ : ಡಿಸಿಎಂ ʻಡಿಕೆಶಿʼ

ಬೆಂಗಳೂರು : ಸಣ್ಣಮಟ್ಟದ ವ್ಯಾಪಾರಿಗಳಿಗೆ ಜಿಎಸ್.ಟಿ ನೋಟೀಸ್‌ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಜಿಎಸ್‌.ಟಿ ಕೌನ್ಸಿಲ್‍ನ ಪತ್ರದ ಪಾತ್ರ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತರಕಾರಿ ಮಾರುವವರು, ಎಳನೀರು ವ್ಯಾಪಾರಿಗಳು, ಹೂಕಟ್ಟುವವರು, ಹಣ್ಣಿನ ವ್ಯಾಪಾರಿಗಳು, ಬೀದಿಬದಿಯ ವ್ಯಾಪಾರಿಗಳಿಗೂ ಕೇಂದ್ರ ಸರ್ಕಾರದ ಜಿಎಸ್‌.ಟಿ ಕಾನೂನಿನಿಂದ ತೊಂದರೆಯಾಗುತ್ತಿದೆ. ಇದರ ವಿರುದ್ಧ ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿ ಹೋರಾಟ ನಡೆಸಲಿದ್ದಾರೆ ಎಂದರು.

2019 ರಲ್ಲಿ ಕೇಂದ್ರ ಸರ್ಕಾರ ಸರಕು ಮತ್ತು ಸೇವೆಗಳ ಕಾಯ್ದೆ (ಜಿಎಸ್.ಟಿ ಆಕ್ಟ್) ಅಧಿಸೂಚನೆ ಹೊರಡಿಸಿದೆ. ಅದರ ಪ್ರಕಾರ 40 ಲಕ್ಷ ರೂ.ಗಳಿಗೂ ಮೇಲ್ಟಟ್ಟ ವಹಿವಾಟು ನಡೆದರೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಬಿಜೆಪಿಯವರು ಬಾಳೆಹಣ್ಣು ತಿಂದು ನಮ ಬಾಯಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ಕೇಂದ್ರಸರ್ಕಾರದ ಜಿಎಸ್.ಟಿ ಕೌನ್ಸಿಲ್ ಬರೆದಿರುವ ಪತ್ರ ನಮ ಬಳಿ ಇದೆ. ಅಗತ್ಯ ಇದ್ದರೆ ಅದನ್ನು ಬಹಿರಂಗಪಡಿಸುತ್ತೇವೆ. ಈ ಪತ್ರದ ಮೂಲಕ ಕ್ರಮ ಕೈಗೊಳ್ಳಲು ಒತ್ತಡ ಹೇರಲಾಗಿದೆ. ಅದರಂತೆ ವಾಣಿಜ್ಯ ತೆರಿಗೆ ಇಲಾಖೆ 14 ಸಾವಿರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟೀಸ್‌ ನೀಡಿದೆ ಎಂದು ಹೇಳಿದರು. ಕರ್ನಾಟಕ ಅತಿ ಹೆಚ್ಚು ಜಿಎಸ್‌.ಟಿ ಪಾವತಿಸುವ ರಾಜ್ಯ. ಜೀವನೋಪಾಯಕ್ಕಾಗಿ ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ಈಗ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರ ಇದನ್ನು ಗಮನಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ರಾಜ್ಯಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯಾವ ರೀತಿ ನಡೆದುಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ. ಆದರೆ ಕೇಂದ್ರದ ಕಾನೂನುಗಳು ಸರಿ ಇಲ್ಲ. ಅವುಗಳನ್ನು ಸರಿಪಡಿಸುವ ಕೆಲಸ ಕೂಡಲೇ ನಡೆಯಬೇಕಿದೆ ಎಂದರು.

ಒಂದು ಲಕ್ಷ ಕೋಟಿ ರೂಪಾಯಿಯ ತೆರಿಗೆ ಸಂಗ್ರಹದ ಗುರಿಯನ್ನು ತಲುಪಬೇಕು ಎಂದು ಮುಖ್ಯಮಂತ್ರಿಯವರು ಆದೇಶಿಸಿದ ಕಾರಣಕ್ಕಾಗಿ ಈ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಸರಿಯಲ್ಲ.ಕೇಂದ್ರ ಸರ್ಕಾರದ ಕಾನೂನುಗಳು ಪರಿಷ್ಕರಣೆಯಾಗಬೇಕು. ಜಿಎಸ್‌.ಟಿ ಕೌನ್ಸಿಲ್‍ಗೆ ಬರೆದ ಪತ್ರವನ್ನು ಬಿಜೆಪಿಯವರು ಒಮೆ ನೋಡಲಿ. ನಾವು ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ. ನಮಲ್ಲಿ ಪರಿಹಾರ ಸಿಗುತ್ತದೆ ಎಂಬ ಕಾರಣಕ್ಕಾಗಿಯೇ ಜನ ನಮನ್ನು ಭೇಟಿ ಮಾಡುತ್ತಾರೆ ಎಂದು ಡಿಕೆಶಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

2 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

5 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

8 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

9 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

12 hours ago