ಬೆಂಗಳೂರು: ಇದೇ ಏಪ್ರಿಲ್ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಠ್ಯದಿಂದ ಕೈಬಿಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸಿದ್ದರು.
ಹೀಗಾಗಿ ಈ ಗೊಂದಲವನ್ನು ಬಗೆಹರಿಸಲು ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ತಜ್ಞರ ಸಮಿತಿ ಇದೀಗ ಸಿಇಟಿ ಪರೀಕ್ಷೆ ಗೊಂದಲದ ಕುರಿತಾಗಿ ವರದಿ ಸಲ್ಲಿಸಿದೆ. ಈ ವರದಿಯನ್ನು ಆಧರಿಸಿ ಸರ್ಕಾರ ಮುಂದಿನ ವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಿಇಟಿ ಸಂಬಂಧ ಆಕ್ಷೇಪ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಆಕ್ಷೇಪ ಹಿನ್ನೆಲೆ ತಜ್ಞರ ವರದಿ ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…