ರಾಜ್ಯ

ಸಿಇಟಿ ಪರೀಕ್ಷೆ ಗೊಂದಲ; ವರದಿ ಸಲ್ಲಿಸಿದ ತಜ್ಞರ ಸಮಿತಿ

ಬೆಂಗಳೂರು: ಇದೇ ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಠ್ಯದಿಂದ ಕೈಬಿಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸಿದ್ದರು.

ಹೀಗಾಗಿ ಈ ಗೊಂದಲವನ್ನು ಬಗೆಹರಿಸಲು ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ತಜ್ಞರ ಸಮಿತಿ ಇದೀಗ ಸಿಇಟಿ ಪರೀಕ್ಷೆ ಗೊಂದಲದ ಕುರಿತಾಗಿ ವರದಿ ಸಲ್ಲಿಸಿದೆ. ಈ ವರದಿಯನ್ನು ಆಧರಿಸಿ ಸರ್ಕಾರ ಮುಂದಿನ ವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಿಇಟಿ ಸಂಬಂಧ ಆಕ್ಷೇಪ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಆಕ್ಷೇಪ ಹಿನ್ನೆಲೆ ತಜ್ಞರ ವರದಿ ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago