ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ತೆಗೆದು ಹಾಕಿದ್ದು ಭಾರೀ ವಿವಾದ ಸೃಷ್ಟಿಸಿತ್ತು. ಈಗ ಬೆಂಗಳೂರಿನ ಮಡಿವಾಳದಲ್ಲಿರುವ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆಯ ಜೀವಶಾಸ್ತ್ರ ಮತ್ತು ಗಣಿತ ಪತ್ರಿಕೆ ಪರೀಕ್ಷೆ ಬರೆಯಲು ಬಂದಿದ್ದ ಐವರು ವಿದ್ಯಾರ್ಥಿಗಳ ಜನಿವಾರವನ್ನು ಸಿಬ್ಬಂದಿಗಳು ಬಲವಂತವಾಗಿ ತೆಗೆದು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ಆನಂದ್ ಸುಧೀರ್ ರಾವ್ ಎಂಬ ವಿದ್ಯಾರ್ಥಿ ಸೇರಿದಂತೆ ಐದಕ್ಕೂ ಹೆಚ್ಚು ಮಕ್ಕಳ ಜನಿವಾರ ತೆಗೆಸಿದ್ದಾರೆ. ಈ ವೇಳೆ ವಿದ್ಯಾರ್ಥಿ ತಗೆಯಲ್ಲ ಎಂದು ಹೇಳಿದಕ್ಕೆ ಮನೆಗೆ ವಾಪಸ್ ಹೋಗಿ ಅಂದಿದ್ದಾರೆ. ಅದಕ್ಕೆ ಕೊನೆಗೆ ಪೋಷಕರು ಮಗನ ಭವಿಷ್ಯದ ದೃಷ್ಠಿಯಿಂದ ಜನಿವಾರ ತೆಗೆದು ಪರೀಕ್ಷೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ವಿವಾದವಾದ ಬೆನ್ನಲ್ಲೇ ಕಾಲೇಜಿಗೆ ತಹಶೀಲ್ದಾರ್, ಶಿಕ್ಷಣಾಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದರು. ಪೋಷಕರ ಮನವೊಲಿಸಿ ಎಲ್ಲೂ ಈ ಬಗ್ಗೆ ಹೇಳದ್ದಂತೆ ಒತ್ತಾಯ ಮಾಡಿ ಲೆಟರ್ ಹಾಕಿಸಿಕೊಂಡಿದ್ದರು. ಅದೇ ಕಾಲೇಜು ಸಿಬ್ಬಂದಿ ಪೋಷಕರಿಗೆ ಕ್ಷಮೆ ಕೇಳಿ, ಜನಿವಾರ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.
ವಸ್ತ್ರ ಸಂಹಿತೆ ನೆಪದಲ್ಲಿ ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರಬಾರದೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದರ ನಡುವೆಯೂ ಪರೀಕ್ಷೆ ಬರೆಯಲು ಬಂದಿದ್ದ ಐವರು ವಿದ್ಯಾರ್ಥಿಗಳ ಜನಿವಾರವನ್ನು ತಪಾಸಣೆ ನಡೆಸುವ ಸಂದರ್ಭದಲ್ಲಿ ತೆಗೆದು ಹಾಕಿದ್ದಾರೆ.
ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದ ಕಚೇರಿಯೊಳಗೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…