ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಟಿಸಿದರು. ಒಟ್ಟು 2,92,782 ವಿದ್ಯಾರ್ಥಿಗಳು ಸಿಇಟಿ ಅರ್ಹತೆ ಪಡೆದಿದ್ದಾರೆ.
ಎಂಜಿನಿಯರಿಂಗ್ ವಿಭಾಗದಲ್ಲಿ ಜಯನಗರದ ಆರ್.ವಿ.ಪದವಿ ಪೂರ್ವ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ರ್ಯಾಂಕ್ ಗಳಿಸಿದರೆ, ಮಹಾಲಕ್ಷ್ಮಿಪುರದ ಕೆ.ಎಂ, ಡಬ್ಲ್ಯು.ಎ. ಪದವಿಪೂರ್ವ ಕಾಲೇಜಿನ ಸೃಜನ್ ಎರಡನೇ ರ್ಯಾಂಕ್ ಹಾಗೂ ಜಯನಗರದ ಆರ್.ವಿ.ಪಿಯು ಕಾಲೇಜಿನ ನೀನಾದ್ ವಶಿಷ್ಟ ಮೂರನೇ ಸ್ಥಾನ ಗಳಿಸಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಏಪ್ರಿಲ್ 22ರಿಂದ ಮೂರು ದಿನಗಳ ಕಾಲ ನಡೆದ ಸಿಇಟಿ ಪರೀಕ್ಷೆಯಲ್ಲಿ ಒಟ್ಟು 3,09,014 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯನ್ನು ರಾಜ್ಯದ 745 ಕೇಂದ್ರಗಳಲ್ಲಿ ನಡೆಸಲಾಗಿದ್ದು, ಪಾರದರ್ಶಕತೆಗಾಗಿ 15,265 ಸಿಸಿಟಿವಿ ಕ್ಯಾಮೆರಾಗಳು, ವೆಬ್ಕಾಸ್ಟಿಂಗ್ ಹಾಗೂ ಮುಖಚಹರೆ ಪತ್ತೆ ಹಚ್ಚುವ ವ್ಯವಸ್ಥೆ ಅಳವಡಿಸಲಾಗಿತ್ತು ಎಂದು ಅವರು ತಿಳಿಸಿದರು.
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…
ಬೀದರ್: ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಅಕ್ರಮವಾಗಿ…
ಬೆಂಗಳೂರು: ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಮುಂದುವರಿದು ವ್ಯಾಪಕವಾಗಿ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಅಬ್ಬರ ಜೋರಾಗುವ ಸ್ಪಷ್ಟ ಮುನ್ಸೂಚನೆ…
ಹೊಸದಿಲ್ಲಿ : ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್…
ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದ್ದೇ ಪೋಷಕರಿಗೆ ಪ್ರೇರೇಪಣೆ ಮಂಜು ಕೋಟೆ ಎಚ್.ಡಿ.ಕೋಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು, ಜಿಲ್ಲೆಯಲ್ಲಿ…