ರಾಜ್ಯ

ಚಾ.ನಗರ | ಹುಲಿ ಮರಿಗಳೊಂದಿಗೆ ಫೋಟೋ,ವಿಡಿಯೋ ; ಸಿಐಡಿ ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು : ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ:-ಮೈಸೂರು ವಿ.ವಿ | ಅಂಕಪಟ್ಟಿ ನೀಡಿಲ್ಲವೆಂದು ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಅಂಕಪಟ್ಟಿ ವಿತರಣೆ

ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

7 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

60 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago