ರಾಜ್ಯ

ಚಾ.ನಗರ | ಹುಲಿ ಮರಿಗಳೊಂದಿಗೆ ಫೋಟೋ,ವಿಡಿಯೋ ; ಸಿಐಡಿ ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು : ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ:-ಮೈಸೂರು ವಿ.ವಿ | ಅಂಕಪಟ್ಟಿ ನೀಡಿಲ್ಲವೆಂದು ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಅಂಕಪಟ್ಟಿ ವಿತರಣೆ

ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

5 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

52 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago