ರಾಜ್ಯ

ಚಾ.ನಗರ | ಹುಲಿ ಮರಿಗಳೊಂದಿಗೆ ಫೋಟೋ,ವಿಡಿಯೋ ; ಸಿಐಡಿ ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು : ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ:-ಮೈಸೂರು ವಿ.ವಿ | ಅಂಕಪಟ್ಟಿ ನೀಡಿಲ್ಲವೆಂದು ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಅಂಕಪಟ್ಟಿ ವಿತರಣೆ

ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago