ರಾಜ್ಯ

ಕುರ್ಚಿ ಉಳಿಸಿಕೊಳ್ಳುವ ಸಮಾವೇಶ : ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು. ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆ ಹೇಳದೆ, ಪೊಲೀಸರ ಮೇಲೆ ಆರೋಪ ಮಾಡಲಾಗಿದೆ. ಪೊಲೀಸರಿಗೆ ಆದೇಶ ಕೊಟ್ಟ ಸರ್ಕಾರದ ತಪ್ಪಿನ ಬಗ್ಗೆ ಎಲ್ಲೂ ಹೇಳಿಲ್ಲ. ಇಂತಹ ಸಮಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಇದೇ ರೀತಿ ಡಿ.ಕೆ.ಶಿವಕುಮಾರ್‌ ಕನಕಪುರದಲ್ಲಿ ಸಮಾವೇಶ ನಡೆಸಿದರೆ ಆಗ ಯಾರ ಬಲ ಹೆಚ್ಚಿದೆ ಎಂದು ತೀರ್ಮಾನಿಸಬಹುದು. ಇಲ್ಲಿ ಪರಸ್ಪರ ಸ್ಪರ್ಧೆ ನಡೆಯುತ್ತಿದೆ ಎಂದರು.

ತನಿಖಾ ಆಯೋಗಗಳನ್ನು ನೇಮಕ ಮಾಡುವಾಗ ಪದೇ ಪದೆ ಇಬ್ಬರನ್ನೇ ನೇಮಕ ಮಾಡಲಾಗುತ್ತದೆ. ಇದರಿಂದಾಗಿ ಜನರಿಗೆ ಸರ್ಕಾರದ ಮೇಲೆ ನಂಬಿಕೆ ಹೋಗಿದೆ. ವಿರೋಧ ಪಕ್ಷದ ಶಾಸಕರಾದ ಬೈರತಿ ಬಸವರಾಜ್‌ ಅವರನ್ನು ಬಗ್ಗುಬಡಿಯಲು ಪೊಲೀಸರೇ ಎಫ್‌ಐಆರ್‌ನಲ್ಲಿ ಅವರ ಹೆಸರು ಬರೆದಿದ್ದಾರೆ. ದೂರು ಕೊಟ್ಟ ಮಹಿಳೆಯೇ ಮುಂದೆ ಬಂದು ಶಾಸಕರ ಹೆಸರನ್ನು ಹೇಳಿಲ್ಲ ಎಂದಿದ್ದಾರೆ. ಆದರೂ ಸರ್ಕಾರದ ದ್ವೇಷ ಸಾಧಿಸುತ್ತಿದೆ ಎಂದರು.

ಅಭಿವೃದ್ಧಿ ಕಾರ್ಯಗಳಿಲ್ಲ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು.

ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್ಧಿ ಮಾಡುವುದರ ಬದಲು ಒಡೆಯುವುದು ಸರಿಯಲ್ಲ. ಬ್ರ್ಯಾಂಡ್‌ ಬೆಂಗಳೂರಿನ ಹೆಸರಲ್ಲಿ ಇದುವರೆಗೆ ಒಂದು ಯೋಜನೆಯೂ ಜಾರಿಯಾಗಿಲ್ಲ ಎಂದರು.

ಬಿಜೆಪಿ ಸರ್ಕಾರ ಇದ್ದಾಗ ಕೇಳಿದ್ದ ಮನೆಯನ್ನೇ ಕೊಡಲಾಗುತ್ತಿತ್ತು. ಕಳೆದೆರಡು ವರ್ಷಗಳಿಂದ ಮನೆ ನೀಡಲು ಅನೇಕ ಪತ್ರಗಳನ್ನು ಬರೆದರೂ ಸರ್ಕಾರ ಸ್ಪಂದಿಸಿಲ್ಲ. ನೀತಿ ಸಂಹಿತೆ, ಶಿಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿಗೂ ಪತ್ರ ಬರೆಯುವ ಇವರು, ಇಲ್ಲಿ ಶಿಷ್ಟಾಚಾರ ಪಾಲಿಸುತ್ತಿಲ್ಲ. ವಿರೋಧ ಪಕ್ಷದ ನಾಯಕನಾದ ನನಗೆ ಮನೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರು.

ಸರ್ಕಾರದಲ್ಲಿ ಹಣವಿಲ್ಲ. ಒಂದು ರೂಪಾಯಿ ಖರ್ಚು ಮಾಡುವಾಗ ಕೂಡ ಬಹಳ ಯೋಚನೆ ಮಾಡಬೇಕು. ಅದಕ್ಕಾಗಿ ಬೀದಿ ವ್ಯಾಪಾರಿಗಳಿಂದ ಬರುವ ಜಿಎಸ್‌ಟಿ ಹೆಚ್ಚಿಸಲು ರಾಜ್ಯ ಸರ್ಕಾರ ಕುತಂತ್ರ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲಾಗಿದೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೂ ಹಾನಿಯಾಗಲಿದೆ. ಜನರಿಗೆ ಅನ್ಯಾಯವಾಗಿದ್ದರೆ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago