ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿ ಅನಾರೋಗ್ಯದ ನಾಟಕವಾಡಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾಳೆ.
ರೋಗಿಯಂತೆ ಕಳೆದ 3 ದಿನಗಳಿಂದ ನಾಟಕವಾಡುತ್ತಾ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾಳೆ. ಎಲ್ಲಾ ಮೆಡಿಕಲ್ ರಿಪೋರ್ಟ್ಗಳಲ್ಲಿ ನಾರ್ಮಲ್ ಅಂತ ಬಂದಿದೆ. ಹೀಗಾಗಿ ಇಂದು ಸಿಸಿಬಿ ಪೊಲೀಸರು, ಚೈತ್ರಾ ಕುಂದಾಪುರಳನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ.
ಇನ್ನು ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ದಿವ್ಯಪ್ರಕಾಶ್ ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರಗೆ ಫಿಟ್ಸ್ ಏನು ಕಂಡು ಬಂದಿಲ್ಲ. ಮೊದಲ ಬಾರಿ ಇಸಿಜಿ ಮಾಡಿದಾಗ ಸ್ವಲ್ಪ ವ್ಯತ್ಯಾಸ ಕಂಡುಬಂದಿತ್ತು. 24 ಗಂಟೆ ಬಳಿಕ ಇಸಿಜಿ ಮಾಡಿದಾಗ ವ್ಯತ್ಯಾಸ ಕಂಡು ಬಂದಿಲ್ಲ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯವು ನಾರ್ಮಲ್ ಇದೆ. ಫಿಟ್ಸ್ ಪತ್ತೆ ಮಾಡುವುದಕ್ಕೆ ಎಂಆರ್ಐ ಹಾಗೂ ಇಇಜಿ ಸ್ಕ್ಯಾನಿಂಗ್ ಮಾಡಿದ್ದು, ಫಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.