ರಾಜ್ಯ

ಮುಸಲ್ಮಾನ ಗುತ್ತಿಗೆದಾರರಿಗೆ ಮೀಸಲಾತಿ ವಿಚಾರ| ರಾಜ್ಯ ಸರ್ಕಾರದಲ್ಲಿರುವ ಹಿಂದೂಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.16) ರಾಜ್ಯ ಸರ್ಕಾರದಿಂದ ಮುಸಲ್ಮಾನರಿಗೆ ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸಲ್ಮಾನರಿಗೆ ಈ ಹಿಂದೆಯೂ ಶೇ.4% ಮೀಸಲಾತಿ ಇತ್ತು. ಆದರೆ ಸಂವಿಧಾನ ಪ್ರಕಾರ ಧಾರ್ಮಿಕ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ ಬೊಮ್ಮಾಯಿ ಅವರು ಮುಖ್ಯಮಂತಿಯಾಗಿದ್ದಾಗ ಮುಸಲ್ಮಾನರ ಮೀಸಲಾತಿಯನ್ನು ಹಿಂಪಡೆಯಲಾಯಿತು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸಲ್ಮಾನರಿಗೆ ಮೀಸಲಾತಿ ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಈಗ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಹಾಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಿಜೆಪಿ ಪಕ್ಷ ಸದನ ಹೊರಗೆ ಹಾಗೂ ಒಳಗೆ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಸರ್ಕಾರದ ತೀರ್ಮಾನವನ್ನು ದೇಶ ವಿರೋಧಿ ನಡೆಯಾಗಿದೆ. ಜೊತೆಗೆ ಇದೊಂದು ಓಲೈಕೆ ರಾಜಕಾರಣವಾಗಿದ್ದು, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago