ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.16) ರಾಜ್ಯ ಸರ್ಕಾರದಿಂದ ಮುಸಲ್ಮಾನರಿಗೆ ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸಲ್ಮಾನರಿಗೆ ಈ ಹಿಂದೆಯೂ ಶೇ.4% ಮೀಸಲಾತಿ ಇತ್ತು. ಆದರೆ ಸಂವಿಧಾನ ಪ್ರಕಾರ ಧಾರ್ಮಿಕ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ ಬೊಮ್ಮಾಯಿ ಅವರು ಮುಖ್ಯಮಂತಿಯಾಗಿದ್ದಾಗ ಮುಸಲ್ಮಾನರ ಮೀಸಲಾತಿಯನ್ನು ಹಿಂಪಡೆಯಲಾಯಿತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸಲ್ಮಾನರಿಗೆ ಮೀಸಲಾತಿ ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಈಗ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಹಾಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಿಜೆಪಿ ಪಕ್ಷ ಸದನ ಹೊರಗೆ ಹಾಗೂ ಒಳಗೆ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಸರ್ಕಾರದ ತೀರ್ಮಾನವನ್ನು ದೇಶ ವಿರೋಧಿ ನಡೆಯಾಗಿದೆ. ಜೊತೆಗೆ ಇದೊಂದು ಓಲೈಕೆ ರಾಜಕಾರಣವಾಗಿದ್ದು, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…