ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.16) ರಾಜ್ಯ ಸರ್ಕಾರದಿಂದ ಮುಸಲ್ಮಾನರಿಗೆ ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸಲ್ಮಾನರಿಗೆ ಈ ಹಿಂದೆಯೂ ಶೇ.4% ಮೀಸಲಾತಿ ಇತ್ತು. ಆದರೆ ಸಂವಿಧಾನ ಪ್ರಕಾರ ಧಾರ್ಮಿಕ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ ಬೊಮ್ಮಾಯಿ ಅವರು ಮುಖ್ಯಮಂತಿಯಾಗಿದ್ದಾಗ ಮುಸಲ್ಮಾನರ ಮೀಸಲಾತಿಯನ್ನು ಹಿಂಪಡೆಯಲಾಯಿತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸಲ್ಮಾನರಿಗೆ ಮೀಸಲಾತಿ ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಈಗ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಹಾಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಿಜೆಪಿ ಪಕ್ಷ ಸದನ ಹೊರಗೆ ಹಾಗೂ ಒಳಗೆ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಸರ್ಕಾರದ ತೀರ್ಮಾನವನ್ನು ದೇಶ ವಿರೋಧಿ ನಡೆಯಾಗಿದೆ. ಜೊತೆಗೆ ಇದೊಂದು ಓಲೈಕೆ ರಾಜಕಾರಣವಾಗಿದ್ದು, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…