ರಾಜ್ಯ

ಡಿಕೆಶಿ ವಿದೇಶದಲ್ಲಿ ಶೋಕ ಕಾಣಲು ಹೋಗಿರಬೇಕು: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬಹುಶಃ ಅವರಿಗೆ ನಮ್ಮ ರಾಜ್ಯವನ್ನು ಬಿಟ್ಟು ಹೊಸ ಲೋಕದಲ್ಲಿ ಶೋಕ ಕಾಣಬಹುದು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್‌.31) ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪಿಎಂ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಳು ದಿನ ಶೋಕಾಚರಣೆ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕಾರಣಕ್ಕೆ ಡಿ.ಕೆ.ಶಿವಕುಮಾರ್‌ ಶೋಕಾಚರಣೆಯನ್ನು ವಿದೇಶದಲ್ಲೇ ಮಾಡಲೆಂದು ಅಲ್ಲಿಗೆ ತೆರಳಿರಬೇಕು. ನಮ್ಮ ರಾಜ್ಯದಲ್ಲೂ ಸಹ ಶೋಕಾಚರಣೆ ಮಾಡಬಹುದು. ಆದರೆ ಡಿಕೆಶಿ ಅವರಿಗೆ ಇಲ್ಲಿ ಶೋಕ ಕಾಣುತ್ತಿಲ್ಲ ಅನ್ನಿಸಿರಬಹುದು. ಅದಕ್ಕಾಗಿ ಹೊಸ ಲೋಕದಲ್ಲಿ ಶೋಕ ಕಾಣಲು ಹೋಗಿರಬಹುದು ಎಂದು ಟೀಕಿಸಿದ್ದಾರೆ.

ಇನ್ನೊಂದು ಕಡೆ ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರು ಕೂಡ ವಿದೇಶಕ್ಕೆ ಹೋಗಿದ್ದಾರೆ. ಅವರಿಗೆ ಒಂಟಿತನ ಕಾಡುತ್ತಿರಬಹುದು ಆದ್ದರಿಂದಲೇ ವಿದೇಶಕ್ಕೆ ಹೋಗಿರಬಹುದು. ಆದರೆ ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಏಕೆಂದರೆ ಅವರು ಮೊದಲಿನಿಂದಲೂ ವಿದೇಶಕ್ಕೆ ತೆರಳುತ್ತಿರುತ್ತಾರೆ ಎಂದಿದ್ದಾರೆ.

ಇದೇ ವೇಳೆ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಚಿನ್‌ ಕುಟುಂಬದವರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಸಿಬಿಐಗೆ ವಹಿಸದಿದ್ದರೆ ನ್ಯಾಯ ಸಿಗಲ್ಲ ಎಂದು ಹೇಳುತ್ತಾರೆ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆ ಈ ವಿಚಾರವನ್ನು ವೈಯಕ್ತಿಕವಾಗಿ ತೆಗೆದುಕೊಂಡು ನಮಗೆ ಸವಾಲ್‌ ಹಾಕಿದ್ದಾರೆ. ಪ್ರಿಯಾಂಕ್‌ ಅವರ ಸ್ನೇಹಿತರೆ ಈ ಆತ್ಮಹತ್ಯೆಗೆ ಕಾರಣ ಎಂದು ಅವರಿಗೂ ಗೊತ್ತು ಈ ಪ್ರಕರಣದಲ್ಲಿ ಸ್ವಪ್ರತಿಷ್ಠೆ ಬಿಡಬೇಕು ಎಂದು ಕಿಡಿಕಾರಿದ್ದಾರೆ.

ನಾವು ಪ್ರಿಯಾಂಕ್‌ ಅವರನ್ನು ಟಾರ್ಗೆಟ್‌ ಮಾಡುತ್ತಿಲ್ಲ. ಆರೋಪ ಬಂದಾಗ ಯಾವ ರೀತಿ ಎದುರಿಸಬೇಕು ಆ ರೀತಿ ಎದುರಿಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ರಾಜೀನಾಮೆ ತೀರ್ಮಾನ ನಿಮ್ಮದ್ದು, ಹೋರಾಟ ನಮ್ಮದು ಎಂದು ತಿರುಗೇಟು ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 mins ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

36 mins ago

ಇಂದಿನಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಆದೇಶಗಳು

ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…

58 mins ago

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

1 hour ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

1 hour ago

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

4 hours ago