ರಾಜ್ಯ

ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಯ್ತು: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ದಲಿತ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್‌ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ. ಅದು ಯಾರಿಗೂ ಸಿಗುತ್ತಿಲ್ಲ. ಹಣ ಎಲ್ಲಿಗೆ ಹೋಗಿದೆ. ಇದು ಸಕಾಲಕ್ಕೆ ಜನರಿಗೆ ಯಾಕೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಜನರ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಕೊಟ್ಟ ಆಶ್ವಾಸನೆ ವಿಚಾರದಲ್ಲಿ ಜನರಿಗೆ ಮೋಸ ವಂಚನೆ ಮಾಡಿದ್ದೀರಿ. ಆ ಕಾರಣದಿಂದ ಗ್ಯಾರಂಟಿ ಅನುಷ್ಠಾನ ಆಗುತ್ತಿಲ್ಲ. ಅಕ್ಕಿ ಖರೀದಿಸಿದರೆ ಅದನ್ನು ಜನರಿಗೆ ಕೊಡಬೇಕು. ತೆಗೆದುಕೊಳ್ಳದೇ ಇದ್ದಲ್ಲಿ ಜನರಿಗೆ ಏನಾದರೂ ಸಬೂಬು ಹೇಳಬಹುದೆಂಬ ಚಿಂತನೆ ಸರ್ಕಾರದ್ದು ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago